ಪುಟಗಳು

05 October 2010

B B M P ಭಿತ್ತಿ ಚಿತ್ರಗಳು ಮತ್ತು ನಮ್ಮ (ಮರ್ಯಾದಸ್ಥ ?) ಜನರು !!!

ನೆನ್ನೆ ಮತ್ತು ಇಂದು ಯಾವುದೊ ಒಂದು ಕಾರ್ಯನಿಮಿತ್ತ ನಮ್ಮ ನಿರ್ಮಲ ಬೆಂಗಳೂರನ್ನು ಸುತ್ತುವ ಭಾಗ್ಯ ನನಗೆ ಒದಗಿ ಬಂದಿತ್ತು. ಬೆಂಗಳುರಿನಲ್ಲೇ ಹುಟ್ಟಿ ಬೆಳದರೂ ಸರಿಯಾಗಿ ಬೆಂಗಳೂರು ತಿಳಿಯದ ನಾನು  BMTC ಬಸ್ ಹಿಡಿದು ಸಂಚರಿಸುವಾಗ ದಾರಿಯ ಉದ್ದಕ್ಕೂ ಅಕ್ಕ-ಪಕ್ಕ ಗೋಡೆಗಳಲ್ಲಿ ಬಿಡಿಸಿದ್ದ ಚಿತ್ರಗಳನ್ನು ನೋಡಿ ಮನಸ್ಸಿಗೆ ತುಂಬಾ ಸಂತೋಷವಾಗಿ ಒಂದು ಕ್ಷಣ ನಾನು ಬೆಂಗಳೂರಿನಲ್ಲಿ ಇದ್ದೆನೆಯೇ ಎಂಬ ಅನುಮಾನ ಬಂತು...ಅವು ನನ್ನ ಕಣ್ಣಿಗೆ ಕೇವಲ ಚಿತ್ರಗಳಂತೆ ಕಾಣಲಿಲ್ಲ...ಕರ್ನಾಟಕದ ಸಂಸ್ಕೃತಿ, ಕಲೆಯ ಇತಿಹಾಸದ ಗತವೈಭವ ಸಾರುತ್ತಿರುವ ಮಹಾನ್ ವ್ಯಕ್ತಿಗಳಂತೆ ಕಂಡವು...ಏನೆ ಆದರು ನಾನು ಇದುವರೆಗೂ ನೋಡಲು ಸಾಧ್ಯವಾಗದಂಥಹ ಅನೇಕ ಚಿತ್ರಗಳನ್ನು ನಾನು ಕಂಡೆ....ಇಂಥಹ ಕಲಾಕೃತಿಗಳನ್ನು ಭಿತ್ತಿಚಿತ್ರಗಳ ಮೂಲಕ ನೋಡಲು ಅಣುವುಮಾಡಿಕೊಟ್ಟ B B M P ಮತ್ತು ಇವುಗಳನ್ನು ಗೋಡೆಯಮೇಲೆ ಚಿತ್ರಸಿದ ಕಲಾವಿದರಿಗೆ ನನ್ನ ನಮನಗಳು....

ಆದರೆ ನನ್ನ ಈ ಸಂತೋಷ ತುಂಬ ಸಮಯ ಉಳಿಯಲಿಲ್ಲ....ಮುಂದೆ ಸಾಗುತ್ತಾ ನಮ್ಮ ನಾಗರೀಕ ಸಮಾಜದ ಮೇಲೆ ಅದರಲ್ಲೂ ನಮ್ಮ ಬೆಂಗಳೂರಿನ ಜನರ ಬಗ್ಗೆ ಅಸಹ್ಯದ ಭಾವನೆ ಹುಟ್ಟಿತು...B B M Pಯವರು ಗೋಡೆ  ಕಂಡಲ್ಲಿ ನಮ್ಮ ಜನರು ಮೂತ್ರ ವಿಸರ್ಜನೆ ಮಾಡುವುದನ್ನು ತಪ್ಪಿಸಲು ಮತ್ತು ನಮ್ಮ ನಿರ್ಮಲ ನರಗದ ಸೌಂದರ್ಯವನ್ನು ಹೆಚ್ಚಿಸಲು ಬಿಡಿಸಿದ್ದ  ಇಷ್ಟು ಸುಂದರವಾದ ಭಿತ್ತಿಚಿತ್ರಗಳ ಎದುರಿಗೆ ನಮ್ಮ ಜನರು (ಕೆಲವರು) ನಾಚಿಕೆಯಿಲ್ಲದೆ ಮೂತ್ರ ವಿಸರ್ಜನೆ ಮಾಡುತ್ತಿದ್ದರು....ಇದನ್ನು ನೋಡಿ ಅನಿಸಿದ್ದು ಮೊದಲು ಸಹ ಅಂದರೆ  ಬಿತ್ತಿಚಿತ್ರಗಳನ್ನು ಬಿಡಿಸುವ ಮುಂಚೆಯೂ ಇಲ್ಲಿ ಮೂತ್ರ ವಿಸರ್ಜನೆ ಮಾಡಬಾರದೆಂಬ ಬರಹ ಕಾಣಿಸುತ್ತಿದ್ದರು ಅದು ನಮಗಲ್ಲ ಕೇವಲ ಮರ್ಯಾದಸ್ಥರಿಗೆಂದು ಅಲ್ಲಿಯೇ ತಮ್ಮ ಕೆಲಸ ಮುಗಿಸಿ ಹೋಗುತ್ತಿದ್ದರು. ಆದರೆ ಭಿತ್ತಿ ಚಿತ್ರಗಳನ್ನು ಬಿಡಿಸಿದ ಮೇಲಾದರೂ ನಮ್ಮ  ಈ ಮರ್ಯಾದಸ್ಥ ಜನರು ನಮ್ಮ ಕಲೆ, ಸಂಸ್ಕೃತಿಗೆ ಬೆಲೆ ನೀಡಿ, ಅವುಗಳನ್ನು ಗೌರವಿಸಿ ಹಾಗೆ ಮಾಡುವುದಿಲ್ಲವೆಂದು ತಿಳಿದ B B M P ಯವರ ನಂಬಿಕೆಯನ್ನು ಸುಳ್ಳು ಮಾಡಿದ್ದರೆ...ಬರೀ ಇದೊಂದೇ ಘನ ಕಾರ್ಯವಲ್ಲ ಅದರ ಜೊತೆಗೆ ಅದೇ ಗೋಡೆಗಳ ಕೆಳಗೆ ಕಸದ ರಾಶಿ ನೋಡಿ ನನಗೆ ಅನ್ನಿಸಿದ್ದು ಕಾನೂನನ್ನು ಪಾಲಿಸುವುದು ಬೇಡ ಕೊನೆಪಕ್ಷ ಆ ಚಿತ್ರಗಳಿಗಾದರು, ಅವುಗಳನ್ನು ಬಿಡಿಸಲು ಕಷ್ಟ ಪಟ್ಟ ಕಲಾವಿದರಿಗದರೂ ಗೌರವ ನೀಡದ ನಮ್ಮ ಜನರ ಹೃದಯ ವೈಶಾಲ್ಯತೆಯನ್ನು ಹೋಗಳಬೇಕಲ್ಲವೇ???

ಸರ್ಕಾರ ಇದಕ್ಕೆಂದೆ ಕಂಡಕಂಡಲ್ಲಿ ನಿರ್ಮಲ ಬೆಂಗಳೂರು ಎಂಬ ಶೀರ್ಷಿಕೆಯಡಿ ಸಾರ್ವಜನಿಕ ಶೌಚಾಲಯಗಳನ್ನೂ ನಿರ್ಮಿಸಿದ್ದರು ಅದನ್ನು ಬಳಸುವ ಬದಲು ಹೀಗೆ ನಗರದ ಸೌಂದರ್ಯ ಹಾಳುಮಾಡುವ, ನಮ್ಮ ಸಂಸ್ಕೃತಿ, ಕಲೆಗೆ ಅಗೌರವ ತೋರಿಸುವ ಜೊತೆಗೆ ಅನಾರೋಗ್ಯ ಹರಡಲು ಕಾರಣವಾಗುವ ಇಂಥಹ ಜನರಿಗೆ ಎಂದು ತಾವು ಮಾಡುತ್ತಿರುವುದು ನಾಚಿಕೆ ಇಲ್ಲದ ಕೆಲಸ ಎಂದು ಅನಿಸುವುದಿಲ್ಲವೇ??? ಜೊತೆಗೆ ಅನೇಕ ಪ್ರವಾಸಿಗರು ಇವುಗಳನ್ನು ನೋಡಿ ನಮ್ಮ ಜನರ ಬಗ್ಗೆ ಅವರಿಗೆ ಮೂಡುವ ಭಾವನೆಗಳೇ ಬೇರೆ ಅಲ್ಲವೇ?? ಇದು ನಮ್ಮ ನಾಡು ಇದರ ಸ್ವಚ್ಚತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಅದಕ್ಕಾಗಿ ಸರ್ಕಾರ ಕಾನೂನು ಮಾಡಿ ಅದನ್ನು ಬಲವಂತವಾಗಿ ನಮ್ಮ ಮೇಲೆ ಹೆರುವ ಅಗತ್ಯವಿರಬಾರದು ಆದರೆ ಅದು ಸಾಧ್ಯವಿಲ್ಲ ಎಲ್ಲಿಯವರಿಗೆ ನಾನು ನಮ್ಮ ಜವಾಬ್ಧಾರಿಯನ್ನು ಅರಿತು ನಡೆದುಕೊಳ್ಳುವ ಹೊರತು ಸರ್ಕಾರವನ್ನು ದೂಷಿಸುವ ನಮ್ಮ ಕಾರ್ಯ ನಿಲ್ಲುವುದಿಲ್ಲ ಅಸಿಲಿಗೆ ಕಾನೂನು ಮಾಡುವುದು ಮಾಡಲಿ ನಾವು ಮುರಿದೆ ತೀರುತ್ತಿವೆ ಎನ್ನುವ  ಇಂಥವರು ಇರುವವರೆಗೂ  ನಮ್ಮ ಸಂಸ್ಕೃತಿ, ಕಲೆ ಉಳಿಯಲು ಸಾಧ್ಯವಾಗದು.....ಜೊತೆಗೆ ಅವುಗಳ ಮೇಲೆ ಗೌರವವು ಬರುವುದಿಲ್ಲ....ಎಲ್ಲೋ ಒಂದು ಕಡೆ ನನಗೆ ಅನಿಸಿದ್ದು  B B M P ಯವರು ಹೀಗೆ ಬಿತ್ತಿಚಿತ್ರಗಳನ್ನು ಬಿಡಿಸಿ ಅವುಗಳ ಮೌಲ್ಯ ಕುಸಿಯಲು ಪರೋಕ್ಷವಾಗಿ ಕಾರಣವಾಗಿದ್ದರೆ ಎಂದು.........

02 October 2010

ಗಾಂಧಿತಾತ...........ರಾಷ್ಟ್ರಪಿತ....

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ...ಪದಗಳಿಗೆ ನಿಲುಕದ ಅವರ ವ್ಯಕ್ತಿತ್ವ, ಅಹಿಂಸ ತತ್ವದ ಪ್ರತಿಪಾದಕ ಹಾಗು ಪಾಲಕ....  ಗಾಂಧೀಜಿ ಬ್ರಿಟಿಷರೊಡನೆ ಹೋರಾಡಿ ನಮ್ಮನೆಲ್ಲಾ ಸ್ವತಂತ್ರ ದೇಶದ ಪ್ರಜೆಗಳನ್ನಾಗಿ ಮಾಡಿದ್ದರೆ..... ಕೇವಲ ಗಾಂಧೀಜಿ ಮಾತ್ರವಲ್ಲ ಅನೇಖ ಸ್ವತಂತ್ರ ಹೋರಾಟಗಾರರ ಶ್ರಮದ ಪ್ರತಿಪಲವೇ ಇಂದು ನಾವೆಲ್ಲರೂ ಅನುಭವಿಸುತ್ತಿರುವ ಸ್ವತಂತ್ರ....ಇವರಿಗೆಲ್ಲರಿಗೂ ನಮ್ಮ ನಮನಗಳು...

ಗಾಂಧೀಜಿ ಎಂದಾಗ ನಮ್ಮ ಕಣ್ಣ ಮುಂದೆ ಬಂದು ನಿಲ್ಲುವ ಚಿತ್ರ...ಶುಭ್ರ ಬಿಳುಪಿನ ಬಿಳಿ ಪಂಚೆ....ಅರ್ದಂಭರ್ದ ಮೈಮುಚ್ಚಿದ ಬಿಳಿ ಶಾಲು....ದುಂಡಗಿನ ಆಕಾರದ ಕನ್ನಡಕ....ಕೈಯಲ್ಲಿ ಒಂದು ಕೋಲು....ಕಾಲಿಗೆ ಚಪ್ಪಲಿ..ಇದು ಅವರ ಚಿತ್ರಣ..... ಇಡೀ ದೇಶ ಹಸಿವು ಬಡತನದಿಂದ ಬಳಲುತ್ತಿರುವ ನಾನು ಮಾತ್ರ ಮೈತುಂಬ ಬಟ್ಟೆ ಧರಿಸಿ ಹೇಗೆ ನಡೆಯಲಿ ಎಂದು ತಮ್ಮ ಉಡುಗೆಯಲ್ಲಿ ಇಡೀ ಭಾರತದ ಚಿತ್ರಣವನ್ನು ಪ್ರತಿಕಿಸಿ ಬಡತನವನ್ನು ಹೋಗಲಾಡಿಸುವ ಪ್ರಯತ್ನ ಮಾಡಿದರು......ರಾಷ್ಟ್ರಪಿತ ಗಾಂಧೀಜಿ ಬಯಸಿದ್ದು ಕೇವಲ ಬ್ರಿಟಿಷರಿಂದ ಸ್ವತಂತ್ರ ಮಾತ್ರವಲ್ಲ ಬದಲಿಗೆ ಭಾರತದ ಪ್ರತಿ ಹಳ್ಳಿಗಳು ಸ್ವಯಂ ಪರಿಪೂರ್ಣತೆ, ಸ್ವಾವಲಂಬನೆ  ಸಾಧಿಸುವುದು, ಸ್ತ್ರಿ ಸ್ವತಂತ್ರದ ಜೊತೆಗೆ ಅವಳು ಸ್ವಾವಲಂಬಿಯಾಗಿ ಬದುಕುವುದು, ಪ್ರತಿಯೊಬ್ಬರೂ ಶಿಕ್ಷಣ ಹೊಂದುಬೇಕೆನ್ನುವುದು.....ಅವರು ರೈತ ನಮ್ಮ ದೇಶದ ಬೇನ್ನೆಲುಬೆಂದು ಹೇಳಿದ್ದರು........ಇವೆಲ್ಲ ಅವರು ಕಂಡ ಕನಸುಗಳು....ಈ ಕನಸುಗಳಲ್ಲಿ ಇಷ್ಟು ನನಸಾಗಿವೆ ಇನ್ನು ಎಷ್ಟೋ ಕನಸಾಗಿಯೇ ಉಳಿದಿವೆ....

ಅವರ ಕನಸಿನಂತೆ ನಮ್ಮ ಹಳ್ಳಿಗಳು ಸ್ವತಂತ್ರ ಬಂದು ಇಷ್ಟು ವರ್ಷವಾದರೂ ಸ್ವಯಂ ಪರಿಪೂರ್ಣತೆ, ಸ್ವಾವಲಂಬನೆಯನ್ನು ಸಾದಿಸುವಲ್ಲಿ ವಿಫಲವಾಗಿದೆ...ಇಂದು ಕೂಡ ಹಳ್ಳಿಗಳು ಸರ್ಕಾರದ ಸಹಾಯಹಸ್ತ ಬಯಸುತ್ತಿವೆ...ಅದು ತಪ್ಪು ಕೂಡ ಅಲ್ಲಾ....ಕಾರಣ ನಮ್ಮ ಪ್ರಜಾಪ್ರಭುತ್ವ ದೇಶದ ಮಹಾದೊರೆಗಳು (ರಾಜಕೀಯ ವ್ಯಕ್ತಿಗಳು)  ಅವುಗಳನ್ನು ಮುಂದುವರೆಯಲು ಬಿಡುವುದು ಇಲ್ಲ ಅಲ್ಲವೇ?? ಇನ್ನು ಸ್ತ್ರಿ ಸ್ವತಂತ್ರ.........ಗಾಂಧಿ ಎಂದು ಒಂಟಿಯಾಗಿ ಹೆಣ್ಣು ಮಧ್ಯ ರಾತ್ರಿ ಓಡಾಡುತ್ತಲೋ ಅಂದು ನಮಗೆ ನಿಜವಾದ ಸ್ವತಂತ್ರ ಎಂದರು....ಆದರೆ ಅದು ಇಂದು ಸ್ವಲ್ಪ ಮಟ್ಟಿಗೆ ಸಾಕರವಗಿದ್ದರು ಬಹಳಷ್ಟು ಹೆಣ್ಣು ಮಕ್ಕಳು ಇದನ್ನು ದುರುಪಯೋಗ ಪಡಿಸಿಕೊಂದಿರುವುದೇ ಹೆಚ್ಚು ಎನ್ನುವುದು ವಾಸ್ತವ......ಇಂದು ಶಿಕ್ಷಣ ಕ್ಷೇತ್ರದಲ್ಲಂತೂ ಕ್ರಾಂತಿಯನ್ನೇ ಮಾಡಿಬಿಟ್ಟಿದ್ದೇವೆ....ಆದರೂ ಇಂದಿನ ಶಿಕ್ಷಣ ಬಹಳ ದುಬಾರಿಯೇ ಸರಿ.......

ಇನ್ನು ನಮ್ಮ  ರಾಜಕೀಯ ವ್ಯಕ್ತಿಗಳು ಎಷ್ಟರ ಮಟ್ಟಿಗೆ ಇವರ ತತ್ವ, ಆದರ್ಶಗಳನ್ನು ಪಾಲಿಸುತ್ತಾರೆ ??? ಹೌದೌದು ನಮ್ಮ ರಾಜಕೀಯ ವ್ಯಕ್ತಿಗಳು ಹಿಂಸೆಯನ್ನು ಕನಸಿನಲ್ಲಿಯೂ ಕಂಡವರಲ್ಲ ಬದಲಿಗೆ ನಿಜವಾಗಿ ಹಿಂಸೆಯನ್ನು ಮಾಡುತ್ತ ಅಧಿಕಾರಕ್ಕಾಗಿ ದೊಡ್ಡ  (ಸ್ವ)ತಂತ್ರ ಹೋರಾಟವನ್ನೇ ಮಾಡಿಬಿಡುತ್ತಾರೆ....ಗಾಂಧೀಜಿಯಾ ಬಗ್ಗೆ ಬರೆಯುವಾಗ ರಾಜಕೀಯ ವ್ಯಕ್ತಿಗಳ ಬಗ್ಗೆ ಬರೆಯುವುದು ಗಾಂಧೀಜಿಗೆ ಮಾಡುವ ಅವಮಾನವೆನಿಸಿದರು ಅದನ್ನು ಬರೆಯಲೇ ಬೇಕೆಂದು ನನ್ನ ಕೈಬೆರಳುಗಳು ಹಾತೊರೆಯುತ್ತವೆ....ದೇಶದ ಪ್ರತಿಯೊಬ್ಬ ಪ್ರಜೆಯು ಮೂಲಭೂತ ಹಕ್ಕು ದೊರೆಯಬೇಕು...ಆದರೆ ಎಲ್ಲಿ ದೊರೆಯುತ್ತಿದೆ...ಬೆಳೆ ಬೆಳೆದು ಇಡೀ ದೇಶಕ್ಕೆ ಅನ್ನ ನೆಡುತ್ತಿದ್ದ ರೈತ ಇಂದು ಬೆಳೆ ಬೆಳೆಯಲಾಗದೆ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ....ಅವರ ಕುಟುಂಬಕ್ಕೆ ಪರಿಹಾರ ಘೋಷಿಸಿದರು ಅದು ಕೇವಲ ಘೋಷಣೆಯಷ್ಟೇ ಹಣ ಅವರ ಕೈಸೇರುವಷ್ಟರಲ್ಲಿ ಹರಿದು ನೂರಾರು ದಿಕ್ಕು ಸೇರಿ ಕೊನೆಗೆ ಅವರಿಗೆ ಸಿಗುವುದು ಕೇವಲ ಒಂದು ದಿನದ ಅಥವಾ ಒಂದು ವಾರದ ಜೀವನ ಸಾಗಿಸಲು ಅಷ್ಟೆ.....ಇಂಥಹ ಅದೆಷ್ಟೋ ಕಷ್ಟದ ಪರಿಸ್ಥಿಯಲ್ಲಿ ಇಂದು ನಮ್ಮ ದೇಶದ ಜನರಿದ್ದಾರೆ ಆದರೆ ನಮ್ಮ ರಾಜಕೀಯ ವ್ಯಕ್ತಿಗಳು ಇದರ ಪರಿವೆ ಇಲ್ಲದೆ ತಮ್ಮ ಕುರ್ಚಿ, ಅಧಿಕಾರಕ್ಕೆ ಗುದ್ದಾಡುತ್ತಾ.... ಚುನಾವಣೆ ಬಂದಾಗ ಮಾತ್ರ ಆಶ್ವಾಸನೆ ಇತ್ತು ಚುನಾವಣೆ ಮುಗಿದ ಬಳಿಕ ತಿರುಗಿಯೂ ನೋಡುವುದಿಲ್ಲ......ಅದರಲ್ಲೂ ಈಗಂತು ನಮ್ಮ ರಾಜಕೀಯ ವ್ಯಕ್ತಿಗಳಿಗೆ ಹಗರಣ ಗಳೆಂದರೆ ನೀರು  ಕುಡಿದಷ್ಟು ಸುಲಭವಾಗಿ ಬಿಟ್ಟಿದೆ .... ಗಾಂಧಿ ಹೇಳಿದ್ದು ಹಳ್ಳಿ ಜನರು ಸ್ವಾವಲಂಬಿಗಳಾಗಬೇಕು ಇಂದು ಆದರೆ ನಮ್ಮ ಜನರು ಅಷ್ಟೆ ಚುನಾವಣೆಯ ವೇಳೆ ನೀಡುವ ನೋಟು, ಬಟ್ಟೆ, ಹೆಂಡಕ್ಕಾಗಿ ತಮ್ಮ ತನವನ್ನೇ ಮಾರಿಕೊಳ್ಳುತ್ತ ದಾಸರಾಗಿ ಬಿಟ್ಟಿದ್ದಾರೆ...

ಅದೆಷ್ಟೋ ಇಂಥಹ ಗಾಂಧಿ ಜಯಂತಿಗಳು, ಸ್ವತಂತ್ರ ದಿನಾಚರಣೆಗಳು, ಬರಬಹುದು ಹೋಗಬಹುದು.....ಕೊನೆಗೆ ಉಳಿಯುವ ಪ್ರಶ್ನೆ.....ನಮಗೆ ಸ್ವತಂತ್ರ ತಂದು ಕೊಡಲು ಹೋರಾಡಿ ಮಾಡಿದ ಜೀವಗಳಿಗೆ ನಾವು ನೀಡುತ್ತಿರುವ ಗೌರವಗಳೆನಾದರೂ ಏನು ?? ಎಷ್ಟರ ಮಟ್ಟಿಗೆ ನಾವು  ಸ್ವತಂತ್ರವನ್ನು ನಮ್ಮ ದೇಶದ ಏಳಿಗೆಗಾಗಿ ಬಳಸಿಕೊಳ್ಳುತ್ತಿದ್ದೇವೆ ?? ಅಸಲಿಗೆ ಸ್ವತಂತ್ರ ಎಂಬ ಪದದ ಅರ್ಥವನ್ನು ನಾವು ತಿಳಿದಿರುವುದದರೂ ಹೇಗೆ ??
ನಿಜವಾದ ಸ್ವಾತಂತ್ರದ ಅರ್ಥ ಮತ್ತು ಅದರ ಸುದುಪಯೋಗದ ವಿನಃ ಇಂಥಹ ಅದೆಷ್ಟೋ ಗಾಂಧಿ ಜಯಂತಿಗಳು, ಸ್ವತಂತ್ರ ದಿನಾಚರಣೆಗಳು ಬಂದರು ಅವು ಕೇವಲ ಹೆಸರಿಗಷ್ಟೇ ಆಚರಣೆಗಳಗಿರುತ್ತವೆಯೇ  ಹೊರತು ನಿಜವಾಗಿ ಮಾನವನ ಮತ್ತು  ದೇಶದ ಅಭಿವೃಧಿ ಸಾಧ್ಯವಿಲ್ಲ ಎಂಬುದು ನನ್ನ ವಯುಕ್ತಿಕ ಅಭಿಪ್ರಾಯ.....